ಕೈಕಂಬ: ಕೆಪಿಸಿಸಿಯ ನೂತನ ರಾಜ್ಯಾಧ್ಯಕ್ಷರ ಪ್ರತಿಜ್ಞಾ ಕಾರ್ಯಕ್ರಮದ ಪೂರ್ವತಯಾರಿ ಕುರಿತಂತೆ ಚರ್ಚಿಸಲು ಮುತ್ತೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಮುತ್ತೂರು ಮಾರ್ಗದಂಗಡಿಯಲ್ಲಿ ಮಂಗಳವಾರ ನಡೆಯಿತು.
ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಸಮದ್, ಗಂಜಿಮಠ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಝಾಕೀರ್ ಸುರಲ್ಪಾಡಿ, ಬಾಷಾ ಮಾಸ್ಟರ್, ಮುತ್ತೂರು ವಲಯ ಕಾಂಗ್ರೆಸ್ ನ ಅಧ್ಯಕ್ಷ ಹರಿಯಪ್ಪ ಮುತ್ತೂರು, ಮಂಗಳೂರು ಉತ್ತರ ದ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ , ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ರುಕ್ಮಿಣಿ, ಫ್ಲೋರಿನ್ ಫೆರ್ನಾಂಡಿಸ್, ವಲಯ ಕಾಂಗ್ರೆಸ್ ನ ಕಾರ್ಯಕರ್ತರು ಮತ್ತು ಯುವ ಕಾಂಗ್ರೆಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

