ಬಂಟ್ವಾಳ : ಬಂಟ್ವಾಳ ತಾ. ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ದೇವಸ್ಥಾನದ ಸುತ್ತುಪೌಳಿಯ ಮಾರ್ಕಿಂಗ್ ಕಾರ್ಯಕ್ರಮ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಅವರ ಮಾರ್ಗದರ್ಶನದಲ್ಲಿ ಸೋಮವಾರ ನಡೆಯಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ. ಎಸ್. ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪ್ರ.ಅರ್ಚಕ ಶಂಕರ ನಾರಾಯ ಹೊಳ್ಳ, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲಕ ಸುಧಾಕರ ಶೆಟ್ಟಿ. ಎಂಜಿನಿಯರ್ ಗೀತಾನಂದ ಅಡಪ, ಸಮಿತಿ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಉಪಾಧ್ಯಕ್ಷ ರಾಧಾಕೃಷ್ಣ ರೈ ಕೊಟ್ಟುಂಜ, ವ್ಯವಸ್ಥಾಪನ ಸಮಿತಿ ಸದಸ್ಯ ಉಮೇಶ್ ಆಳ್ವ, ಮತ್ತಿತರರು ಉಪಸ್ಥಿತರಿದ್ದರು.
