ಬಂಟ್ವಾಳ: ಮಾನವ ಬಂಧುತ್ವ ವೇದಿಕೆ ಬಂಟ್ವಾಳ ತಾಲೂಕು ಸಂಚಾಲನ ಸಮಿತಿ ವತಿಯಿಂದ ಬಡಮಕ್ಕಳಿಗೆ ಹಾಲು ವಿತರಿಸುವ ಮುಇಲಕ ಬಸವ ಪಂಚಮಿಯನ್ನು ಡಾ.ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆಯಿತು.ವೇದಿಕೆಯ ಜಿಲ್ಲಾ ಸಂಚಾಲಕ ಚೆನ್ನಕೇಶವ ಅವರ ನಿರ್ದೇಶನದಂತೆ ಬಂಟ್ವಾಳ ತಾಲೂಕು ಸಂಚಾಲಕ ರಾಜ ಚಂಡ್ತಿಮಾರ್ ಹಾಗೂ ಸಾಮಾಜಿಕ ಕಾರ್ಯಕರ್ತ ರಮೇಶ್ ಅವರ ನೇತೃತ್ವದಲ್ಲಿ ಬಡ ಮಕ್ಕಳಿಗೆ ಹಾಲು ವಿತರಣೆ ನಡೆಸಲಾಯಿತು.

