ಕೈಕಂಬ: ಎಡಪದವು ಗ್ರಾಮಪಂಚಾಯತ್ ವ್ಯಾಪ್ತಿಯ ಪದ್ರೆoಗಿ ಮೋನಪ್ಪ ಕರ್ಕೇರ ಮನೆಯ ರಸ್ತೆಯ 34 ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟೀಕರಣ ಕಾಮಗಾರಿಗೆ ಉತ್ತರ ಶಾಸಕ ಡಾ. ಭರತ್ ವೈ ಶೆಟ್ಟಿ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಜಿಲ್ಲಾಪಂಚಾಯತ್ ಸದಸ್ಯ ಜನಾರ್ಧನ ಗೌಡ ಮುಚ್ಚೂರು, ಎಡಪದವು ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲತಿ, ಮಾಜಿ ಉಪಾಧ್ಯಕ್ಷ ಗಂಗಾಧರ್ ಉತ್ತರ ಮಂಡಲ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಅಮೃತ್ ಪಾಲ್ ಜೋಯೆಲ್ ಡಿ’ಸೋಜಾ, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಅಮಿತಾ ಶೆಟ್ಟಿ, ಪ್ರ. ಕಾರ್ಯದರ್ಶಿ ಅರುಣಾ ಭಾಸ್ಕರ್ ಶೆಟ್ಟಿ, ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಎಡಪದವು, ಕಾಮಗಾರಿ ಗುತ್ತಿಗೆದಾರರಾದ ಜಗದೀಶ್ ಕುಲಾಲ್ ಪಾಕಜೆ, ಉತ್ತರ ಬಿಜೆಪಿ ಕಾರ್ಯದರ್ಶಿ ಗಣೇಶ ಪಾಕಜೆ, ರೈತ ಮೋರ್ಚಾ ಉಪಾಧ್ಯಕ್ಷ ಸತೀಶ್ ಬಳ್ಳಾಜೆ, ಪ್ರ. ಕಾರ್ಯದರ್ಶಿ ಆನಂದ ದೇವಾಡಿಗ, ಪಕ್ಷದ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು, ಮತ್ತು ಗ್ರಾಮಸ್ಥರು ಹಾಜರಿದ್ದರು.
