ಬಂಟ್ವಾಳ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುವ ಶಿಲಾನ್ಯಾಸದ ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಪೊಳಲಿ ಶ್ರೀ ರಾಜರಾಜೇಶ್ವರಿ ಹಾಗೂ ಬಿ.ಸಿ.ರೋಡಿನ ಶ್ರೀರಕ್ತೇಶ್ವರೀ ದೇವಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ವಿಶೇಷ ಪೂಜೆ ನಡೆಯಿತು.
ಪೊಳಲಿಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ,ತಾ.ಪಂ ಸದಸ್ಯ ಯಶವಂತ ಪೊಳಲಿ,ಯುವ ಮೋರ್ಚಾದ ಸುದರ್ಶನ್ ಬಜ,ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್,ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ,ನಂದರಾಮ್ ರೈ,,ಸುಕೇಶ್ ಚೌಟ,ವಾಮನ ಆಚಾರ್ಯ ಉಪಸ್ಥಿತರಿದ್ದರು.
ಹಾಗೆಯೇ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿದೇವಸ್ಥಾನದಲ್ಲಿ ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಅವರ ನೇತೃತ್ವದಲ್ಲಿ ವಿಶೇಷಪೂಜೆ,ಪ್ರಾರ್ಥನೆ ನಡೆಯಿತು.ಭೂಮಿಪೂಜೆ ಪ್ರಯುಕ್ತ ಶ್ರೀಕ್ಷೇತ್ರದ ಅವರಣದಲ್ಲಿ ಅಶ್ವಥ ಸಸಿಯನ್ನು ನೆಡಲಾಯಿತು. ಶಾಸಕ ರಾಜೇಶ್ ನಾಯ್ಕ್ ,ಜಿಲ್ಲಾ ಪ್ರ.ಕಾರ್ಯದರ್ಶಿರಾಮದಾಸ್ ಬಂಟ್ವಾಳ,ಪುರಸಭಾ ಸದಸ್ಯರಾದ ವಿದ್ಯಾವತಿ,ಹರಿಪ್ರಸಾದ್,ಜಯಂತಿ,ಸತೀ
