ಉಡುಪಿ:ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಸಂಚಾಲಕರಾದ ಶ್ರೀ ಪಿ .ಜಿ .ಪಂಡಿತ್ ರವರು ಧ್ವಜಾರೋಹಣಗೈದರು.
ಪ್ರಾಂಶುಪಾಲೆ ಶ್ರೀಮತಿ ಜೆಸ್ಸಿ ಆಂಡ್ರ್ಯುವ್ಸ್ , ಉಪ ಪ್ರಾಂಶುಪಾಲೆಯರಾದ ಶ್ರೀಮತಿ ಜ್ಯೋತಿ ಸಂತೋಷ್, ಶ್ರೀಮತಿ ಶಕೀಲಾಕ್ಷಿ ಕೃಷ್ಣ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆಶಾ ನಾಯಕ್ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

