ಬಂಟ್ವಾಳ: ಸಂಪೂರ್ಣ ಶಿಲಾಮಯವಾಗಿ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಗಣಪತಿ ದೇವರ ಗುಡಿ ಹಾಗೂ ಸುತ್ತುಪೌಳಿಯ ಪಾದುಕಾನ್ಯಾಸ ಕಾರ್ಯಕ್ರಮ ರವಿವಾರ ಜರಗಿತು.

ಕ್ಷೇತ್ರದ ಧರ್ಮದರ್ಶಿ ದೇಜಪ್ಪ ಬಾಚಕೆರೆ ಅವರು ಪಾದುಕಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಜೀವ ಪೂಜಾರಿ ಗಾಣದಪಡ್ಪು , ವಿಶ್ವನಾಥ ಗುರುಸ್ವಾಮಿ ಮಂಗಳೂರು, ಸರಪಾಡಿ ಅಶೋಕ ಶೆಟ್ಟಿ, ಯಶವಂತ ಪೂಜಾರಿ ದೇರಾಜೆ, ಪುರುಷೋತ್ತಮ ಪೂಜಾರಿ ಮೊಗರು ಮಜಲು, ಶ್ರೀಧರ ರೈ ಮಾವಿನಕಟ್ಟೆ, ರಾಧಾಕೃಷ್ಣ ರೈ ಮಾವಿನಕಟ್ಟೆ, ಚಂದ್ರಹಾಸ ಶೆಟ್ಟಿ ಹೊಳ್ಳರಗುತ್ತು, ಓಬಯ ಕಜೆಕ್ಕಾರು, ಆನಂದ ಶೆಟ್ಟಿ ಬಾಚಕೆರೆ ಮತ್ತಿತರರು ಉಪಸ್ಥಿತರಿದ್ದರು.
