ಬಂಟ್ವಾಳ: ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚದ ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಗೆ  ಉಚಿತ ನೋಂದಾವಣೆ  ಕಾರ್ಯಕ್ರಮ   ವೀರಕಂಬ ಶ್ರೀ ಶಾರದ ಭಜನಾ ಮಂದಿರದಲ್ಲಿ ನಡೆಯಿತು .ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ ಕುಮಾರ್ ಶೆಟ್ಟಿ ಅರೆಬೆಟ್ಟು ರವರು  ಉದ್ಘಾಟಿಸಿ, ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತನಾದರೆ ದೇಶವೇ ಆರೋಗ್ಯವಂತ ದೇಶವಾಗುತ್ತದೆ. ಆರೋಗ್ಯದ ಬಗ್ಗೆ ಗಮನ ನೀಡುವುದು ಅಗತ್ಯವಾಗಿದ್ದು ಕೇಂದ್ರ ಸರಕಾರದ ಆಯುಷ್ಮಾನ್ ಕಾರ್ಡು ಪ್ರತಿಯೊಬ್ಬರಿಗೂ ಆಪತ್ಕಾಲದಲ್ಲಿ ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಣಿ ಶಕ್ತಿಕೇಂದ್ರದ ಅಧ್ಯಕ್ಷರಾದ  ರೊನಾಲ್ಡ್ ಡಿಸೋಜ ವಹಿಸಿದ್ದರು .IMG-20200830-WA0066
ವೇದಿಕೆಯಲ್ಲಿ ಶ್ರೀ ಶಾರದಾ ಭಜನಾ ಮಂದಿರದ ಸಂಚಾಲಕರಾದ ನಾರಾಯಣ ಭಟ್ ಬೆತ್ತ ಸರವು ,ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್ ರೈ ,ಉಪಸ್ಥಿತರಿದ್ದರು.  ಬಂಟ್ವಾಳ ಶಾಸಕರಾದ ಶ್ರೀಯುತ ರಾಜೇಶ್ ನಾಯಕ್ ಉಳಿಪಾಡಿಗುತ್ತು,  ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ  ಗೀತಾ ಚಂದ್ರಶೇಖರ್ ನೆರಳಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಆಗಮಿಸಿ ಶುಭ ಹಾರೈಸಿದರು.
ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಬ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯೆ ಜಯಂತಿ ಜನಾರ್ಧನ್ ,ಉದ್ಯಮಿ ಸಂದೀಪ್ ಕುಮಾರ್ ಶೆಟ್ಟಿ  ಅರೆಬೆಟ್ಟು, ಬಿಜೆಪಿ ಹಿಂದುಳಿದ ವರ್ಗದ ಸದಸ್ಯರಾದ ವೀರಪ್ಪ ಮೂಲ್ಯ, ವೀರಕಂಬ ಗ್ರಾಮ  ಬೂತ್ ಸಮಿತಿಯ  ಅಧ್ಯಕ್ಷರುಗಳಾದ  ದಿನೇಶ್ ಪೂಜಾರಿ  ಹಾಗೂ ಸದಾಶಿವ , ಪ್ರಧಾನ ಕಾರ್ಯದರ್ಶಿಗಳಾದ  ಪ್ರಕಾಶ್ ಬೆತ್ತ ಸರವು,  ರಮೇಶ್ ಗೌಡ ಮೈರ, ಬಿಜೆಪಿ ಎಸ್. ಟಿ.  ಮೋರ್ಚಾ   ಸದಸ್ಯರಾದ  ಕೇಶವ ನಾಯ್ಕ  ಕೆಮ್ಮಟೆ, ಬಂಟ್ವಾಳ  ಭೂ ಅಭಿವೃದ್ಧಿ  ಬ್ಯಾಂಕ್   ನಿರ್ದೇಶಕರಾದ  ಚಂದ್ರಶೇಖರ   ಬಾಯಿಲ, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಉಪಸ್ಥಿತರಿದ್ದರು ಸುಮಾರು 6 73 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು

By suddi9

Leave a Reply

Your email address will not be published. Required fields are marked *