ಬಂಟ್ವಾಳ: ಕಂದಾಯ ಇಲಾಖೆ ಬಂಟ್ವಾಳ  ಜ! ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ , ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಇಂದು ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಗಳಿಂದ ರಕ್ತದಾನ ಶಿಬಿರ ಮಿನಿವಿಧಾನ ಸೌಧದಲ್ಲಿ ನಡೆಯಿತು.913052c3-d52b-452d-9920-944d9e6a4086

ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಉದ್ಘಾಟಿಸಿ ಮಾತನಾಡಿದ ಅವರು ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ  ರಕ್ತದಾನ ಶಿಬಿರ ಆಯೋಜನೆ ಮಾಡಿ  ಅ ಮೂಲಕ ಸಮಾಜದ ಹಿತಕಾಯುವ ಕೆಲಸವನ್ನು ಬಂಟ್ವಾಳ ತಹಶೀಲ್ಸಾರ್ ರಶ್ಮಿ ನೇತ್ರತ್ವದಲ್ಲಿ  ಕಂದಾಯ ಇಲಾಖೆ ಮಾಡಿದೆ , ಅಭಿನಂದನೀಯ ಕಾರ್ಯಕ್ರಮ ಎಂದರು. ಸರಕಾರಿ ಕೆಲಸದ ಜೊತೆಯಲ್ಲಿ ಸಾಮಾಜದ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಎಂದರು.ಕೋವಿಡ್ ಜೊತೆಗೆ ಕೆಲವೊಂದು  ಘಟನೆಗಳು ನಡೆದರೂ ಎದೆಗುಂದದೆ ಇಂತಹ ಉತ್ತಮ ಕಾರ್ಯಕ್ರಮ ಗಳನ್ನು ನಡೆಸಿರುವುದು ಖುಷಿ ತಂದಿದೆ ಎಂದರು.a07eb86c-b91e-405c-b6ac-1675ae5a8bde

ಕಾರ್ಯಕ್ರಮದ ಸಂಯೋಜಕಿ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್ ಮಾತನಾಡಿ , ಕಂದಾಯ ಇಲಾಖೆಯ ಪ್ರತಿಯೊಬ್ಬರ ಸಹಕಾರದಿಂದ ಕಾರ್ಯಕ್ರಮ ಗಳನ್ನು ಆಯೋಜಿಸಲು ಸಾಧ್ಯವಾಗಿದೆ , ಮುಂದೆಯೂ ಎಲ್ಲರ ಸಹಕಾರ ಅಗತ್ಯ ಎಂದರು. ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಸ್ವತಃ ರಕ್ತದಾನ ದಾನ ಮಾಡುವ ಮೂಲಕ ಇಲಾಖಾ ಸಿಬ್ಬಂದಿ ಗಳಿಗೆ ಸ್ಪೂರ್ತಿಯಾದರು.74a4bf9b-036f-42d4-9250-9fd3f32fdd1e

ಬಂಟ್ವಾಳ ಬೂಡಾ ಆಧ್ಯಕ್ಷ ದೇವದಾಸ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜಾ , ತಾಲೂಕು ವೈದ್ಯಾಧಿಕಾರಿ ದೀಪಪ್ರಭು, ದೇರಳಕಟ್ಟೆಯ ಡಾ! ಶ್ರೀಲಕ್ಷ್ಮಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ತಹಶೀಲ್ದಾರ್ ರಶ್ಮಿ ಅವರ ವಿಶೇಷ ಮುತುವರ್ಜಿಯಿಂದ ಕಳೆದ ವರ್ಷ ಗಾಂಧಿ ಜಯಂತಿ ಯ ಅಂಗವಾಗಿ ಮಿನಿವಿಧಾನ ಸೌಧದವನ್ನು ಸಂಪೂರ್ಣ ವಾಗಿ ಶುಚಿ ಮಾಡುವ ಮೂಲಕ ಇತರ ಇಲಾಖೆಗಳಿಗೆ ಮಾದರಿಯಾಗಿದ್ದರು.

ಈ ಬಾರಿ ಎರಡನೇ ವರ್ಷದ ಅಂಗವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ಗೆ ಕಾರಣವಾಗಿದೆ.ಉಪತಹಶೀಲ್ದಾರ್ ರಾದ ರಾಜೇಶ್ ನಾಯ್ಕ್, ರವಿಶಂಕರ್,   ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಹಾಗೂ ಕಚೇರಿ ಸಿಬ್ಬಂದಿ ಗಳು ಹಾಗೂ ಗ್ರಾಮ ಸಹಾಯಕರು , ಗ್ರಾಮಕರಣೀಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *