ಬಂಟ್ವಾಳ: ಮುಂದಿನ ಕೆಲವೇ ದಿನಗಳಲ್ಲಿ ಗ್ರಾ.ಪಂ. ಚುನಾವಣೆ ಎದುರಾಗಲಿದ್ದು ,ಒಂದು ಮತಕ್ಕಾಗಿ ಮದ್ಯ ಹಂಚುವ ವಿಚಾರ ಗಮನಕ್ಕೆ ಬಂದರೆ ಅಂತಹ ಪಂಚಾಯತ್ ನಲ್ಲಿ ಚುನಾವಣೆ ಬಹಿಷ್ಕರಿಸುವ ಧೈರ್ಯವನ್ನು ನವ ಜೀವನ ಸಮಿತಿಯ ಸದಸ್ಯರು ತೋರಬೇಕು ಎಂದು ಶ್ರೀ.ಕ್ಷೇ.ಧ.ಗ್ರಾ.ಯೋ.ಯ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ತಿಳಿಸಿದ್ದಾರೆ.ಬಂಟ್ವಾಳದಲ್ಲಿರುವ ಯೋಜನೆಯ ಜಿಲ್ಲಾ ಕಚೇರಿ ಉನ್ನತಿಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಸಮಿತಿ, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್
ಮಧ್ಯ ವ್ಯಸನದಿಂದಾಗಿ ಬೀದಿ ಪಾಲಾಗುತ್ತಿದ್ದ ಬದುಕಿಗೆ ಮಧ್ಯವರ್ಜನ ಶಿಬಿರದ ಮೂಲಕ ನವ ಜೀವನ ಸಿಕ್ಕಿದೆ. ಹೊಸ ಬದುಕಿಗೆ ಪ್ರೇರಣೆ ನೀಡಿದವರಿಗೆ ಈ ಕಾರ್ಯಕ್ರಮ ಕೃತಜ್ಞತೆ ಸಲ್ಲಿಸುವ ದಿನವೂ ಆಗಿದೆ. ಗ್ರಾಮಾಭಿವೃದ್ದಿ ಯೋಜನೆ ಉತ್ತಮ ಅವಕಾಶವನ್ನು ನೀಡಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳುವುದು ಒಳಿತು ಎಂದು ಹೇಳಿದರು.
ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೋಡಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ರುಕ್ಮಯ ಪೂಜಾರಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರುಗಳಾದ ಕೈಯ್ಯೂರು ನಾರಾಯಣ ಭಟ್, ಕಿರಣ್ ಹೆಗ್ಡೆ ಅನಂತಾಡಿ ,ಪ್ರಕಾಶ್ ಕಾರಂತ್, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾಧವ ವಳವೂರು ಅತಿಥಿಗಳಾಗಿದ್ದು,ಶುಭಹಾರೈಸಿದರು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ರೋನಾಲ್ಡ್ ಡಿಸೋಜಾ ಅಮ್ಟಾಡಿ, ಮೇಲ್ವಿಚಾರಕ ಕೇಶವ, ತಾಲೂಕಿನ ಎಲ್ಲಾ ವಲಯಾಧ್ಯಕ್ಷರು, ಮೇಲ್ವಿಚಾರಕರು,ನವಜೀವನ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಫಲಾನುಭವಿಗಳಿಗೆ ವೀಲ್ ಚೆಯರ್, ಅನಾರೋಗ್ಯ ಪೀಡಿತರಿಗೆ ವಾಟರ್ ಬೆಡ್ ವಿವಿಧ ಸಲಕರಣೆ ಹಾಗೂ ಸಹಾಯಧನವನ್ನು ವಿತರಿಸಲಾಯಿತು. ಹಾಗೆಯೇ ಭಾಗವಹಿಸಿದ ನವಜೀವನ ಸದಸ್ಯರಿಗೆ ಮಾಸ್ಕ್ ಜೊತೆಗೆ ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಕೋವಿಡ್ -19 ನಿಯಮವನ್ನು ಪಾಲಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರು,ನವಜೀವನಸದಸ್ಯರ ಸಹಿತ ಎಲ್ಲರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಷಾರ್ಚನೆ ಸಲ್ಲಿಸಿದರು. ಶ್ರೀ ಕ್ಷೇ.ಧ.ಗ್ರಾ.ಯೋ.ಯ ಬಂಟ್ವಾಳ ಘಟಕದ ಯೋಜನಾಧಿಕಾರಿ ಜಯಾನಂದ ಪಿ, ಪ್ರಸ್ತಾವಿಸಿ, ಸ್ವಾಗತಿಸಿದರು. ವಿಟ್ಲ ಘಟಕದ ಯೋಜನಾಧಿಕಾರಿ ಮೋಹನ್ ವಂದಿಸಿದರು. ಹರಿಣಾಕ್ಷಿ, ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
