ಬಂಟ್ವಾಳ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹಿಳೆಯರನ್ನು ನೆನಪಿಸಿ ಕೊಳ್ಳುವಾಗ ಕಿತ್ತೂರು ರಾಣಿ ಚೆನ್ನಮ್ಮ ಅಗ್ರಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ..ಬ್ರಿಟಿಷರ ಸೈನ್ಯವನ್ನುಎದುರಿಸುವ ಅವರ ಸಾಮರ್ಥ್ಯ.ದೇಶ ಭಕ್ತರನ್ನು ಒಗ್ಗೂಡಿಸಿ ರಾಷ್ಟ್ರವನ್ನು ಉಳಿಸಲು ಹೋರಾಡಿದ ರೀತಿ ಎಲ್ಲರಿಗೂ ಆದರ್ಶ ಎಂದು ಬಂಟ್ವಾಳ ತಹಶೀಲ್ದಾರ್  ರಶ್ಮಿ. ಎಸ್ ಆರ್ ರವರು ಹೇಳಿದರು. IMG-20201023-WA0056
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ  ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ರವಿಶಂಕರ್ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಸ್ವಾಗತಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *