ಬಂಟ್ವಾಳ: ಶಾಸಕ ರಾಜೇಶ್ ನಾಯಕ್ ಉಳಿಪಾಡಿ ಅವರು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಾಲಯಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಬಳಿಕ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ನಡೆಯುವ ಸಾರ್ವಜನಿಕ ಶಾರದಮಹೋತ್ಸವ ಕ್ಕೆ ಬೇಟಿ ನೀಡಿ ಶಾರದಾ ಪೂಜೆಯ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟಿ ಗೋವಿಂದ ಪ್ರಭು, ಪ್ರಮುಖರಾದ ಉದಯಕುಮಾರ್ ರಾವ್ ಬಂಟ್ವಾಳ, ಪ್ರಮೋದ್ ಕುಮಾರ್ ಭಟ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರು ಹಾಜರಿದ್ದರು. 
