ಬಂಟ್ವಾಳ: ಜಿ.ಪಂ. ಸದಸ್ಯ ಬಿ.ಪದ್ಮಶೇಖರ ಜೈನ್  ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಸುಳ್ಳು ಸುದ್ದಿ ಪ್ರಕಟಿಸಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪುಂಜಾಲಕಟ್ಟೆ ಆರಕ್ಷಕ ಠಾಣೆಗೆ  ದೂರು ನೀಡಿದರು.

5
ಇತ್ತೀಚೆಗೆ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದಿದ್ದು, ಇದಕ್ಕೆ ಪದ್ಮ ಶೇಖರ ಜೈನ್ ಅವರ ಕಲ್ಲಿನ ಕೋರೆ ಕಾರಣವೆಂದು ಆರೋಪಿಸಿ ಅವಹೇಳನಕಾರಿಯಾಗಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ  ಹರಿಯಬಿಟ್ಟಿದ್ದರು ಎಂದು ಆರೋಪಿಸಲಾಗಿದೆ .  ಅವರು ದೇವಸ್ಥಾನದಿಂದ ೨ ಕಿ.ಮೀ. ದೂರದಲ್ಲಿ  ನಡೆಸುತ್ತಿದ್ದ ಕಲ್ಲಿನ ಕೋರೆಯನ್ನು   ಎರಡು ವರ್ಷಗಳ ಹಿಂದೆ ಸ್ಥಗಿತಗೊಳಿಸಿದ್ದಾರೆ.ಆದರೂ ರಾಜಕೀಯ ದುರುದ್ದೇಶದಿಂದ  ಪದ್ಮಶೇಖರ ಜೈನ್ ಅವರ ಮೇಲೆ ಅವಹೇಳನಕಾರಿಯಾಗಿ ಆರೋಪಿಸಲಾಗಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕಾಗಿ  ದೂರಿನಲ್ಲಿ ತಿಳಿಸಲಾಗಿದೆ.

By suddi9

Leave a Reply

Your email address will not be published. Required fields are marked *