ಬಂಟ್ವಾಳ: ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಶಾಂತಿಅಂಗಡಿ ಮತ್ತು ನೂತನ ಉಪಾಧ್ಯಕ್ಷೆ ಜೇಸಿಂತಾ ಡಿಸೋಜ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಪಾಣೆಮಂಗಳೂರಿನಲ್ಲಿ ನಡೆಯಿತು. ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ನೂತನ ಅಧ್ಯಕಗಷ ,ಉಪಾಧ್ಯಕ್ಷರನ್ನು ಸನ್ಮಾನಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್ ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ , ಬೇಬಿ ಕುಂದರ್,ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಕ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರದಾನಕಾರ್ಯದರ್ಶಿಯಾದ ಮೊಹಮ್ಮದ್ ನಂದಾವರ,ಪುರಸಭಾ ಸದಸ್ಯರಾದ ಲೋಲಾಕ್ಷ,ಸಿದ್ದೀಕ್ ,ಮಸ್ಜಿದ್-ಎ- ಮಸೀದಿಯ ಅಧ್ಯಕ್ಷ ಸಲಾಮ್,ಪ್ರ.ಕಾರ್ಯದರ್ಶಿ ಮುತ್ತಲಿಬ್ ಗೂಡಿನಬಳಿ ,ವಲಯ ಕಾಂಗ್ರೆಸ್ ಅಧ್ಯಕ್ಷ ಕರೀಂ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಖಾದರ್, ಪರ್ವೀಜ್ ಜಿ ಕೆ , ಕಾಸಿಮ್,ಯುವ ಕಾಂಗ್ರೆಸ್ ಘಟಕ ರಿಜ್ವಾನ್ ಗೂಡಿನಬಳಿ, ಅಮೀನ್,ಸಂಶೀರ್, ಮೊದಲಾದವರು ಉಪಸ್ಥಿತರಿದ್ದರು.

