ಬಂಟ್ವಾಳ : ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡ ವೀರಪುರುಷರಾದ ಕೋಟಿ-ಚೆನ್ನಯ್ಯರ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾಪವನ್ನು ಸಚಿವ ಸಂಪುಟ ಸಭೆಯಲ್ಲಿ ಅನುನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪುಇಜಾರಿಯವರ ನೇತೃತ್ವದ ಕರಾವಳಿ ಶಾಸಕರ ನಿಯೋಗ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪರವರನ್ನು ಗುರವಾರ ಭೇಟಿಯಾಗಿ ಮನವಿಯನ್ನು ಸಲ್ಲಿಸಿತು.
ವಿಧಾನಸಭೆಯ ಮುಖ್ಯಸಚೇತಕ,ಶಾಸಕ ಸುನೀಲ್ ಕುಮಾರ್,ಶಾಸಕರಾದ ಉಮಾನಾಥ ಕೋಟ್ಯಾನ್ ,ಸಂಜೀವಮಠಂದೂರು,ಹರೀಶ್ ಪೂಂಜಾ,ವೇದವ್ಯಾಸ ಕಾಮತ್,ರಾಜೇಶ್ ನಾಯ್ಕ್ ಉಳಿಪಾಡಿ,ಡಾ.ವೈ ಭರತ್ ಶೆಟ್ಟಿ,ರಘಪತಿಭಟ್ ಉಪಸ್ಥಿತರಿದ್ದರು.
