ಮೂಡುಬಿದಿರೆ : ಜೈನ ಧರ್ಮದ ಬಗ್ಗೆ ಹಾಗೂ ಜೈನ ಮುನಿ ಪರಂಪರೆಯ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಗಳು ಹರಿದಾಡುತ್ತಿದ್ದು, ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ಮೂಡುಬಿದಿರೆ ಜೈನ್ ಮಿಲನ್ ಹಾಗೂ ಜೈನ ಯುವ ಸೇನೆಯ ಪದಾಧಿಕಾರಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದರು.

ವಾಣಿಶ್ರೀ ಎಂಬ ಫೇಸ್ಸುಕ್ ಅಕೌಂಟ್ ನಲ್ಲಿ ಜೈನಮುನಿಗಳ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮೂಡುಬಿದಿರೆ ಪೊಲೀಸ್ ಅಧಿಕಾರಿಗಳಲ್ಲಿ ಮನವಿ ಮಾಎಇದರು.

ಮೂಡುಬಿದಿರೆ ಜೈನ್ ಮಿಲನ್ ಅಧ್ಯಕ್ಷ ಶ್ವೇತಾ ಜೈನ್, ನಿರ್ದೇಶಕ ಜಯರಾಜ್ ಕಂಬಳಿ, ಕೋಶಾಧಿಕಾರಿ ದಿವ್ಯ ವೀರೇಂದ್ರ, ಯುವ ಜೈನ್ ಮಿಲನ್ ಅಧ್ಯಕ್ಷ ನಿತೇಶ್ ಬಳ್ಳಾಲ್, ಅಕ್ಷಯ್ ಕುಮಾರ್ ಜೈನ್, ಪ್ರಶಾಂತ ಅಭಯ್ ಮುಂತಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *