ವಾಮದಪದವು:ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ಫೆಬ್ರವರಿ 19 ರಿಂದ 24 ರವರೆಗೆಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಭಾನುವಾರ ಕ್ಷೇತ್ರದಲ್ಲಿ ಬಿಡುಗಡೆಗೊಂಡಿತು.ಶ್ರೀಧಾಮದ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.86cc9b6b-d2c2-4b46-ab80-79df17b53e60

ಮೋಹನದಾಸ ಸ್ವಾಮೀಜಿ ಆಶ್ರೀವರ್ಚನ ನೀಡಿ ನಮ್ಮೊಳಗಿನ ಶತ್ರುತ್ವವನ್ನು ನಾಶಮಾಡಿ ಸದ್ಗುಣಗಳನ್ಮು ಬೆಳೆಸಿಕೊಳ್ಳಲು ಧರ್ಮಕಾರ್ಯಗಳು ಪ್ರೇರಣೆಯಾಗುತ್ತದೆ. ವೈಯಕ್ತಿಕ ಸಂಪತ್ತಿನ ಆಕರ್ಷಣೆಗಿಂತ ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಗಳ ಆಕರ್ಷಣೆ ಹೆಚ್ಚಾದಾಗ ನಾಡು ಸುಭೀಕ್ಷೆಯಾಗುತ್ತದೆ. ಪದವು ದೇವಳದ ಬ್ರಹ್ಮಕಲಶ ಸರ್ವರ ಸಹಕಾರದಿಂದ ನಾಡಿಗೆ ಉತ್ತಮ ಸಂದೇಶ ಕೊಡುವ ಉತ್ಸವವಾಗಲಿ ಎಂದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸಿ ಮಾತನಾಡಿ ಊರಿನ ಪ್ರತೀ ಭಕ್ತಾದಿಗಳು ದೇವಸ್ಥಾನದ ಸೇವೆಯನ್ನು ತಮ್ಮ ಕರ್ತವ್ಯವೆಂದು ಭಾವಿಸಿ ನಿರ್ವಹಿಸಿದರೆ ಅದು ತಾಯಿಗೆ ಸಮರ್ಪಣೆಯಾಗುತ್ತದೆ, ಸರ್ವರು ಸಂಘಟಿತರಾಗಿ ಬ್ರಹ್ಮಕಲಶದ ಯಶಸ್ವಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ.ಎಂ.ಮೋಹನ್ ಆಳ್ವ,ಉಧ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ,  ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ  ಪ್ರೊ.ತುಕಾರಾಂ ಪೂಜಾರಿ ಅತಿಥಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.

ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಸಮಿತಿಗಳ ಪ್ರಮುಖರಾದ ಬಾಬು ಪೂಜಾರಿ ಕೌಡೇಡಿ, ಸುಲೋಚನಾ ಜಿ.ಕೆ.ಭಟ್, ಭೋಜರಾಜ ಶೆಟ್ಟಿ ಕೊರಗಟ್ಟೆ, ಅಮ್ಮು ರೈ ಹರ್ಕಾಡಿ, ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ವಸಂತ ಶೆಟ್ಟಿ ಅರ್ಕೆದೊಟ್ಟು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಾಲ ಅಂಚನ್ ಆಲದಪದವು ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಸಾಲ್ಯಾನ್ ಕಲಸಡ್ಕ ವಂದಿಸಿದರು. ರಂಗಕಲಾವಿದ ಎಚ್ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು. ಮಾಗಣೆಯ ಅಪಾರ ಭಕ್ತಾದಿಗಳು ಪಾಲ್ಗೊಂಡರು.

@ಗೋಪಾಲ ಅಂಚನ್

By Suddi9

Leave a Reply

Your email address will not be published. Required fields are marked *