ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ಸ್ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಇದೇ ೬ರಂದು ರಾತ್ರಿ ಗಂಟೆ ೯ .೩೦ಕ್ಕೆ ಕಟೀಲು ಮೇಳದಿಂದ ೨೮ನೇ ವರ್ಷದ ‘ಶ್ರೀ ದೇವಿ ಲಲಿತೋಪಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ.
ಅದೇ ದಿನ ಬೆಳಿಗ್ಗೆ ರಾಯಿ ಅಶ್ವತ್ಥಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
