ಮೂಡುಬಿದಿರೆ: ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಸೋಮವಾರ ಜಾಮೀನುರಹಿತ ಪ್ರಕರಣ ದಾಖಲಾಗಿದೆ.ಕೋಟಿ ಚೆನ್ನಯ್ಯ , ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ, ಬಿಲ್ಲವ ಮುಖಂಡ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಜಗದೀಶ್ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ರಾಜು ಪಿ.ಕೆ ಸಹಿತ ಬಿಲ್ಲವ ಮುಖಂಡರು ಅವರು ಶುಕ್ರವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಜಗದೀಶ್ ಅಧಿಕಾರಿ ವಿರುದ್ಧ ದಂಡ ಸಂಹಿತೆ ಕಲಂ 295(ಎ), 505 ಅಡಿಯಲ್ಲಿ ಜಾಮೀನುರಹಿತ ಪ್ರಕರಣ ದಾಖಲಾಗಿದೆ.
