ಪೊಳಲಿ: ರಾಮಕೃಷ್ಣ ತಪೋವನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿ ಗಳಿಗೆ ಸುಮಾರು 250 ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ತಪೋವನದ ವತಿಯಿಂದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಎಂ ಆರ್ ಪಿ ಎಲ್ ಚೀಫ್ ಜನರಲ್ ಮ್ಯಾನೆಜರ್ ಚಿರಾಯು ಆಚಾರ್ಯ ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಉಪಸ್ಥಿತರಿದ್ದರು.


