ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಇದೇ ಬರುವ ಎ ೩೧ರಂದು ೪೭ನೇ ಭಜನಾ ಮಂಗಲೋತ್ಸವ ಮತ್ತು ೧೫ನೇ ವರ್ಧಂತಿ ಉತ್ಸವ ನಡೆಯಲಿದೆ. ಇದೇ ವೇಳೆ ನಾಗ ದೇವರಿಗೆ ಆಶ್ಲೇಷಾ ಬಲಿ, ತಂಬಿಲ, ಭಜನೆ ರಂಗಪೂಜೆ, ಗಾಯತ್ರಿ ದೇವಿಗೆ ಕಲಶಾಭಿಷೇಕ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ೭ ಗಂಟೆಗೆ ಭಕ್ತಿಗಾನ ವೈಭವ, ೮ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ಮತ್ತು ಧಾರ್ಮಿಕ ಸಭೆ ನಡೆಯಲಿದೆ.
ರಾತ್ರಿ ೯.೩೦ಗಂಟೆಗೆ ಬೆಂಕಿನಾಥೇಶ್ವರ ಮೇಳದಿಂದ ‘ಭಾರ್ಗವ ವಿಜಯ ಶ್ರೀನಿವಾಸ ಕಲ್ಯಾಣ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಧರ್ಮದರ್ಶಿ ಕೆ.ಎಸ್.ಪಂಡಿತ್ ತಿಳಿಸಿದ್ದಾರೆ.
