ಬಂಟ್ವಾಳ : ಮಂಗಳೂರು ವಿಶ್ವವಿದ್ಯಾನಿಲಯವು ೨೦೨೦ ಸೆಪ್ಟೆಂಬರ್ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಎರಡು ರ್ಯಾಂಕ್ಗಳನ್ನು ಪಡೆದುಕೊಂಡಿದೆ. ಬಿಕಾಂ ವಿಭಾಗದ ಜಾಯ್ಲಿನ್ ಲವಿಟಾ ಫಲೇರಾ ಮೂರನೇ ರ್ಯಾಂಕ್, ಬಿಎಸ್ಸಿ ವಿಭಾಗ ಕಾವ್ಯ ಪ್ರಭು ಜಿ. ಆರನೆಯ ರ್ಯಾಂಕ್ ಗಳಿಸಿದ್ದಾರೆ. ರ್ಯಾಂಕ್ ವಿಜೇತರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.


