ಬಂಟ್ವಾಳ : ತಾಲೂಕಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು. ದೇವಳದ ತಂತ್ರಿ ವಾಮಂಜೂರು ಅನಂತ ಪದ್ಮನಾಭ ಉಪಾಧ್ಯಾಯ, ಪ್ರಧಾನ ಅರ್ಚಕ ಕೆ.ಸುಂದರ ಹೊಳ್ಳ, ಆಡಳಿತ ಮೊಕ್ತೇಸರ ಎಂ. ಪದ್ಮರಾಜ ಬಲ್ಲಾಳ್ ಮಾವಂತೂರು, ಪ್ರಮುಖರಾದ ರವಿಶಂಕರ ಶೆಟ್ಟಿ ಬಡಾಜೆಗುತ್ತು, ವಕೀಲ ಅಶ್ವನಿ ಕುಮಾರ್ ರೈ ಮತ್ತಿತರರು ಇದ್ದರು.
