ಮಂಗಳೂರು:ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಸಸಿಹಿತ್ಲು ಬೀಚ್ ನ ಪ್ರದೇಶಗಳಿಗೆ ಸನ್ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.885572b4-1892-44dc-8456-3df4ca22bd6f

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕಾಳಜಿ ಕೇಂದ್ರದಲ್ಲಿರುವ 182 ಕುಟುಂಬಗಳಿಗೆ ತಲಾ 10 ಸಾವಿರ ರೂ ನೀಡಲಾಗಿದ್ದು, ಭಾಗಶಃ ಹಾನಿಯಾದ ಮನೆಗಳಿಗೆ 5 ಲಕ್ಷ ರೂ ಹಾಗೂ ಪೂರ್ತಿ ಹಾನಿಯಾದ ಮನೆಗಳಿಗೆ 10 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.e48bccb6-a32c-4d83-968b-db7d6e800e6d

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮೂಲ್ಕಿ ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಸ್ಥಳೀಯ ಜನಪ್ರತಿನಿದಿಗಳು, ಪಕ್ಷದ ಮುಖಂಡರುಗಳು, ಸ್ಥಳೀಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *