ಬೆಂಗಳೂರು:ರಾಜ್ಯ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನು ಬೇಟಿ ಮಾಡಿದ ಶಾಸಕ ರಾಜೇಶ್ ನಾಯ್ಕ್ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಸನ್ಮಾನ್ಯ ಲಕ್ಷ್ಮಣ ಸವದಿಯವರನ್ನು ಈ ದಿನ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಟಿಯಾಗಿ ಸಾರಿಗೆ ವ್ಯವಸ್ಥೆಯ ಬಗ್ಗೆ ಚರ್ಚಿಸಿದರು. 
ಈ ಸಂಧರ್ಭದಲ್ಲಿ ಸಾರಿಗೆ ಇಲಾಖೆಯು ಕೋವಿಡ್ ಸಂಧರ್ಭ ತಯಾರಿಸಿದ ಐಸಿಯುಬೆಡ್ ವ್ಯವಸ್ಥೆಯ ಬಸ್ಸಿನ ಬಗ್ಗೆ ಸಚಿವರು ಮಾಹಿತಿ ನೀಡಿದರು. ಶಾಸಕರ ಪ್ರದೇಶಾಭಿವೃದ್ದಿ ಅನುದಾನದ ಮೂಲಕ ಬಂಟ್ವಾಳ ಕ್ಷೇತ್ರಕ್ಕೆ ಈ ಬಸ್ಸು ಖರೀದಿ ಮಾಡುವ ಬಗ್ಗೆ ಶಾಸಕರು ಸಚಿವರಲ್ಲಿ ಒಪ್ಪಿಗೆ ಸೂಚಿಸಿದರು.
ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪವನ್ ಕುಮಾರ್ ಉಪಸ್ಥಿತರಿದ್ದರು.
