ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ೩೭ ವರ್ಷ ದುಡಿದು ನಿವೃತ್ತಿಗೊಂಡ ಹಿರಿಯ ಸಿಬ್ಬಂದಿ ಜಯಲಕ್ಷ್ಮಿ ಇವರನ್ನು ಗುರುವಾರ ಅಭಿನಂದಿಸಲಾಯಿತು. ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಜಿಲ್ಲಾ ನಿರ್ದೇಶಕ ರಾಜಶೇಖರ ಜೈನ್, ಜಿಲ್ಲಾ ವ್ಯವಸ್ಥಾಪಕ ಮುತ್ತುರಾಜ್, ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಜಿ., ಮಾಜಿ ವ್ಯವಸ್ಥಾಪಕ ಅಬ್ದುಲ್ ಸತ್ತಾರ್ ಮತ್ತಿತರರು ಇದ್ದರು.
