ಕೈಕಂಬ: ಬಡಗ ಎಡಪದವು ಗ್ರಾಮ ಪಂಚಾಯತ್ ಕೋವಿಡ್-19 ಕಾರ್ಯಪಡೆಯಿಂದ ಗ್ರಾಮಸ್ಥರಿಗೆ ಕೊರೊನಾ ಲಸಿಕೆ ನೀಡುವ ಅಭಿಯಾನಕ್ಕೆ ಬಡಗ ಎಡಪದವು ಬೆಳ್ಳೆಚ್ಚಾರ್ ಶಾಲೆಯಲ್ಲಿ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಚಾಲನೆ ನೀಡಿದರು.

ಬಡಗ ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಕೆ.ವಿ, ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ,ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ, ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಎಡಪದವು, ಕೊಂಪದವು ಪ್ರಾಥಮಿಕ ಅರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ |ಚೈತನ್ಯ, ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಣ್, ಪಂಚಾಯತ್ ಸದಸ್ಯರುಗಳು, ಸ್ಥಳೀಯ ಮುಖಂಡರಾದ ತಾರನಾಥ ಸಫಳಿಗ, ಶಿವಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
