ಪೊಳಲಿ: ಕೋವಿಡ್ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಸಂಸ್ಥೆ ವಿನ್ಯಾಸಗೊಳಿಸಿದ ವಿನೂತನ ಸಾರಿಗೆ ಸುರಕ್ಷಾ-ಐಸಿಯು ಬಸ್ ಗೆ ಪೊಳಲಿ ಕ್ಷೇತ್ರ ಎದುರು ಮಂಗಳವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಇವರ ಮುತುವಜಿ೯ಯಿಂದ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಬಂಟ್ವಾಳ ಕ್ಷೇತ್ರಕ್ಕೆ ಬಂದ ಏಕೈಕ ಬಸ್ ಇದಾಗಿದೆ. 

ವಿಶೇಷ ಸೇವೆಯ ಬಸ್ ಉದ್ಘಾಟನೆಗೆ ಅಗಮಿಸಿದ ಸಂದರ್ಭ ಸಂಸದರು, ಸಚಿವರು ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ, ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ, ಬಂಟ್ವಾಳ ತಹಶೀಲ್ದಾರ್ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು, ದೇವಳದ ದೇವಳದ ಪ್ರಧಾನ ಅರ್ಚಕ ಮಾಧವ ಭಟ್, ನಾರಾಯಣ ಭಟ್, ಕೆ. ರಾಮ್ ಭಟ್ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ತಾರನಾಥ ಆಳ್ವ, ಸೂರ್ಯ ನಾರಾಯಣ ರಾವ್, ಕಶೆಕೋಡಿ ಸೂರ್ಯನಾರಾಯಣ ಭಟ್, ಗಿರಿಪ್ರಕಾಶ್ ತಂತ್ರಿ ಪೊಳಲಿ, ಕಾರ್ಯನಿರ್ವಹಣಾಧಿಕಾರಿ ಪಿ. ಜಯಮ್ಮ, ಕೆ.ಎಸ್. ಆರ್ಟಿಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಬಿ.ಸಿ.ರೋಡು ಘಟಕ ವ್ಯವಸ್ಥಾಪಕ ಶ್ರೀಶ ಭಟ್, ಅಧಿಕಾರಿಗಳಾದ ರಮೇಶ್ ಶೆಟ್ಟಿ, ರವೀನಾ, ಬೂಡ ಆದ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಯಶವಂತ ನಾಯ್ಕ್ ನಗ್ರಿ, ಗಣೇಶ್ ರೈ, ಮಹೇಶ್ ಶೆಟ್ಟಿ, ಕೇಶವ ದೈಪಲ, ಯಶವಂತ ಪೂಜಾರಿ, ವೆಂಕಟೇಶ್ ನಾವಡ, ಕಿಶೋರ್ ಪಲ್ಲಿಪಾಡಿ, ಚಂದ್ರಾವತಿ, ವಾಮನ ಆಚಾರ್ಯ, ಕಾರ್ತಿಕ್ ಬಲ್ಲಾಳ್, ರಾಧಕೃಷ್ಣ ತಂತ್ರಿ, ಸುಕೇಶ್ ಚೌಟ, ಲೋಕೇಶ್ ಭರಣಿ , ಸಂಪತ್ ಕುಮಾರ್ ಶೆಟ್ಟಿ, ನಂದಕುಮಾರ್ ರೈ, ಸುಬ್ರಾಯ ಕಾರಂತ ಮತ್ತಿತರರು ಇದ್ದರು.
Attachments area

