ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ವಿದ್ಯಾರ್ಥಿಗಳಿಗೆ ರಾಮಕೃಷ್ಣ ತಪೋವನ ಪೊಳಲಿ ಇದರ ಅಧ್ಯಕ್ಷರಾದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಪುಸ್ತಕ ವಿತರಣೆಯನ್ನು ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆಂಕಟೇಶ ನಾವುಡ ವಹಿಸಿದ್ದರು. ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತಾಲೂಕು ಪಂಚಾಯಿತಿ ನಿರ್ಗಮಿತ ಸದಸ್ಯರಾದ ಯಶವಂತ ಪೂಜಾರಿ ಅವರು ಉಪಸ್ಥಿತರಿದ್ದರು. ಶಾಲೆಯ ಮುಖ್ಯಸ್ಥರಾದ ರಾಧಾಕೃಷ್ಣ ಭಟ್ ಸ್ವಾಗತಿಸಿದರು. ವಸಂತಿ ವಂದಿಸಿದರು. ಜಾನೆಟ್ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.
