ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್ ಜಾರಿಯಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದಿನಿಂದಲೇ ಜಾರಿಯಾಗಲಿದೆ.
ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್ಡೌನ್ ಘೋಷಣೆಯಾಗಿದೆ.
