ಕಟೀಲು:ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಎರಡು ವರುಷ ಪೂರೈಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ಸೀಯಾಳ ಸಮರ್ಪಿಸಿ, ಪ್ರಾರ್ಥಿಸಿದರು. ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು.
ಈ ಸಂದರ್ಭ ಶ್ರೀಹರಿನಾರಾಯಣದಾಸ ಆಸ್ರಣ್ಣ , ಕಮಲಾದೇವಿ ಪ್ರಸಾದ್ ಆಸ್ರಣ್ಣ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಕಸ್ತೂರಿ ಪಂಜ, ಈಶ್ವರ ಕಟೀಲ್, ಆದರ್ಶ ಶೆಟ್ಟಿ, ಅಭಿಲಾಷ್ ಶೆಟ್ಟಿ, ದಾಮೋದರ್ ಕೊಡೆತ್ತೂರು, ಪ್ರಕಾಶ್ ಕುಕ್ಯಾನ್, ಗುರುರಾಜ್ ಮಲ್ಲಿಗೆಯಂಗಡಿ, ಅರುಣ್ ಮಲ್ಲಿಗೆಯಂಗಡಿ ಮತ್ತಿತರರಿದ್ದರು.
