ಬಂಟ್ವಾಳ : ತಾಲೂಕಿನ ಅಂಬೇಡ್ಕರ್ ನಗರ ನಾವೂರದಲ್ಲಿ ಅಗಸ್ಟ್ 29 ರಂದು ಆದಿತ್ಯವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು.WhatsApp Image 2021-08-31 at 1.56.33 PM (1)ಅಂಬೇಡ್ಕರ್ ನಗರದ ಹಿರಿಯರಾದ ಜಾನು, ಬೆಲ್ಚಡ, ಅಣ್ಣು (ಯಾನೆ ಅನಿಲ್ ) ತುಲು ಲಿಪಿ ಕಲಿಯುವ ಕಾರ್ಯಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಇವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.WhatsApp Image 2021-08-31 at 1.56.33 PMಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ನಾವೂರಿನ ಅಂಬೇಡ್ಕರ್ ಭವನದ ಮಾರ್ಗದರ್ಶಕರಾದ ಶಂಕರ್ ಎನ್ ಎಸ್ ನಾವೂರ ಇವರು ತುಲು ಭಾಷೆಯ ಲಿಪಿಯನ್ನು ನಾವೆಲ್ಲರೂ ಕಲಿಯಬೇಕು ಮತ್ತು ತುಲುನಾಡಿನೆಲ್ಲೆಡೆ ಕಲಿಸಬೇಕು ಹಾಗೂ ತುಲು ಭಾಷೆಗೆ ಸುಮಾರು ವರ್ಷದ ಇತಿಹಾಸ ಇದೆ. ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಮಾತೃಭಾಷೆಗೆ ಸ್ಥಾನಮಾನ ಸಿಗುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭವನದ ಗೌರವ ಅಧ್ಯಕ್ಷರಾದ ಸದಾನಂದ, ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ದೇಜಪ್ಪ ಉಪಸ್ಥಿತರಿದ್ದರು. ದೀಕ್ಷಾ ಸ್ವಾಗತಿಸಿ, ಶ್ರವಣ್ ನಾವೂರ ಧನ್ಯವಾದ ನೀಡಿದರು. ದೀಕ್ಷಾ ನಾವೂರ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *