ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನ ೨೦೨೦-೨೧ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಸಭಾಗೃಹದಲ್ಲಿ ಮಂಗಳವಾರ ನಡೆಯಿತು. ಪಂಚಾಯತ್ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಕಜಿಪಂ ಉಪ ಕಾರ್ಯದರ್ಶಿ ಕೆ ಆನಂದ ಕುಮಾರ್ ನೋಡೆಲ್ ಅಧಿಕಾರಿಯಾಗಿದ್ದರು.gur-sep-28-gurpur jamabandi-1

ಆಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ಇನ್ನೂ ಕಂತಿನ ಹಣ ಸಂದಾಯವಾಗಿಲ್ಲ. ಎನ್‌ಆರ್‌ಇಜಿ ಯೋಜನೆಯಲ್ಲಿ ಸಾಮಗ್ರಿ ಖರೀದಿ ಹಣ ಮಂಜೂರಾಗಿಲ್ಲ ಎಂದು ಸದಸ್ಯರು ಹೇಳಿದಾಗ, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.gur-sep-28-gurpur jamabandi-2

ರಸ್ತೆಗಳಲ್ಲಿ ಅಳವಡಿಸಿರುವ ಬೀದಿದೀಪಗಳಿಗೆ ಹೆಚ್ಚುವರಿ ವಿದ್ಯುತ್ ಲೈನ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯೂ ಕೇಳಿ ಬಂತು. ಪಿಡಿಒ ಅಬೂಬಕ್ಕರ್ ಸ್ವಾಗತಿಸಿ, ಪ್ರಸ್ತಾವಿಸಿದರು. ಕಾರ್ಯದರ್ಶಿ ಅಶೋಕ್ ಲೆಕ್ಕಪತ್ರ ಮಂಡಿಸಿದರು. ಪಂಚಾಯತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

By suddi9

Leave a Reply

Your email address will not be published. Required fields are marked *