ಕೈಕಂಬ : ರಾಷ್ಟ್ರೀಯ ಹೆದ್ದಾರಿ ೧೬೯ರ ಗುರುಪುರ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಬಳಿ ಕೈಕಂಬದತ್ತ ಹೋಗುತ್ತಿದ್ದ ಟಿಪ್ಪರೊಂದು ಮಂಗಳೂರಿನತ್ತ ಸಾಗುತ್ತಿದ್ದ ಬಸ್ಗೆ ಸೈಡ್ ಕೊಡುವ ಧಾವಂತದಲ್ಲಿ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಟಿಪ್ಪರ್ ಡಿಕ್ಕಿ ಹೊಡೆದು, ಚಾಲಕನ ಕಾಲಿಗೆ ಗಂಭೀರ ಗಾಯವಾದ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಟಿಪ್ಪರ್ ಎದುರು ಭಾಗ ನುಜ್ಜುಗುಜ್ಜಾಗಿದ್ದು, ಡೋರ್ಗೆ ಸಿಲುಕಿದ ಚಾಲಕನ ಕಾಲು ತೆಗೆಯಲು ಹರಸಾಹಸ ಪಡಬೇಕಾಯಿತು. ಗಾಯಾಳುವನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 
