ನವದೆಹಲಿ : ಇಡೀ ದೇಶದ ಜನತೆಯನ್ನೇ ಬೆಚ್ಚಿ ಬೀಳಿಸಿದ್ದ ಬಹುಕೋಟಿ ಹಗರಣ 2 ಜಿ ತರಾಂಗಾಂತರ ಪ್ರಕರಣದಲ್ಲಿ ಮಾಜಿ ಸಚಿವ ಎ.ರಾಜಾ , ಕನ್ನಿಮೋಳಿ ಸೇರಿದಂತೆ 19 ಜನರ ವಿರುದ್ದ ಆರೋಪ ಸಾಬೀತಾಗಿದೆ. ನ್ಯಾಯಾಲಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿಯನ್ನು ದೋಷಿ ಎಂದು ತೀರ್ಪು ನೀಡಿದೆ.
ಪ್ರಸ್ತುತ ಮೇಲ್ನೋಟಕ್ಕೆ ಆರೋಪ ಸಾಬೀತಾದಂತೆ ಕಂಡು ಬಂದಿದೆ ಎಂದು ನ್ಯಾಯಾಲಯ ಹೇಳಿದೆ. 2ಜಿ ತರಂಗಾಂತರ ಹಂಚಿಕೆ ಸಂಬಂಧಿಸಿದಂತೆ 1.76 ಲಕ್ಷ ಕೋಟಿ ಹಗರಣ ನಡೆದಿದೆ ಎಂಬ ಆರೋಪ ಎ. ರಾಜಾ ಮೇಲೆ ಕೇಳಿಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿದ ದೆಹಲಿ ವಿಶೇಷ ನ್ಯಾಯಾಲಯ, ರಾಜಾ, ಕನಿಮೊಳಿ ಸೇರಿದಂತೆ 18 ಮಂದಿ ಆರೋಪಿಗಳ ಪಾತ್ರವಿದೆ ಎಂದು ತೀರ್ಪು ನೀಡಿದೆ.


