ಮುಂಬಯಿ : ಕಿರುತೆರೆ ನಟ, ಹಿರಿಯ ರಂಗಭೂಮಿ ಕಲಾವಿದ, ಕತೆಗಾರ, ಕುದುರೆಮುಖ ಸಂಸ್ಥೆಯ ನಿವೃತ್ತ ಉದ್ಯೋಗಿ ವೇಣುಮಿತ್ರ ಕಾಸರಗೋಡು ಅಲ್ಪಕಾಲದ ಅಸೌಖ್ಯದಿಂದ ಡಿ.೩೧ರಂದು ಗುರುವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಸಾಗರದೀಪ ಸಿನೆಮಾದಲ್ಲೂ ಬಣ್ಣ ಹಚ್ಚಿ ಹಿರಿತೆರೆಯಲ್ಲೂ ಸೈ ಎನಿಸಿಕೊಂಡಿದ್ದ ಇವರು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡಿದ ‘ರಂಗ ಭಾಸ್ಕರ’ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ವೇಣುಮಿತ್ರ ಭಾಜನರಾಗಿದ್ದರು.
ಯೆಯ್ಯಾಡಿ ನಿವಾಸಿ ಆಗಿದ್ದ ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಸೇರಿದಂತೆ ಅಪಾರ ಬಂಧು ಬಳಗ ಅಭಿಮಾನಿಗಳನ್ನು ಅಗಲಿದ್ದಾರೆ
