ಎಳ್ಳಾರೆ : ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯ ಪ್ರಥಮ ವರ್ಷದ ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ಮಂಡಳಿಯ ಲಾಂಛನವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಮಲ್ಯ ಅವರು ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿಯ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸ್ಥಾಪಕರಾದ ದೇವೇಂದ್ರ ಕಾಮತ್ ಎಳ್ಳಾರೆ,ರವೀಂದ್ರ ಪ್ರಭು ಕಡ್ತಲ,ಪೃಥ್ವಿರಾಜ ನೆಲ್ಲಿ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
