ಪೊಳಲಿ: ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾ ಬಂಧ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಜ.06ರಂದು ಗುರುವಾರ ಬಿಡುಗಡೆ ಗೊಳಿಸಿದರು.
ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಭಾಸ್ಕರ ಭಟ್, ಭಾಸ್ಕರ ರಾವ್ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಜೀರ್ಣೋದ್ಧಾರ, ಕಾರ್ಯಾಧ್ಯಕ್ಷ ವಿಷ್ಣು ಮೂರ್ತಿ ಭಟ್, ಕರಿಯಂಗಳ ಗ್ರಾಮಪಂಚಾಯತ್ ಅಧ್ಯಕ್ಷ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಪೊಳಲಿ ವೆಂಕಟೇಶ್ ನಾವಡ, ರಮೇಶ್ ರಾವ್, ನರಸಿಂಹ ಮಯ್ಯ ಬಿಸಿ ರೋಡ್, ಸುಬ್ರಾಯ ಕಾರಂತ ಪೊಳಲಿ ಜೀರ್ಣೋದ್ಧಾರ ಸಮಿತಿ, ಸದಸ್ಯರು ಜೀರ್ಣೋದ್ಧಾರ ಸಮಿತಿ, ಪದಾಧಿಕಾರಿಗಳು ಇದ್ದರು.

