ಕಾರ್ಕಳ: : ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಎಳ್ಳಾರೆ ಹಾಲು ಉತ್ಪಾದಕರ ಮಹಿಳಾ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ನಡೆಯಿತು.

ಆ ಪ್ರಯುಕ್ತ ದೊಂಡೇರಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕೃತಕ ಗರ್ಭಧಾರಣ ಕಾರ್ಯಕರ್ತ ಸುಭಾಸ್ ಪೂಜಾರಿ ಎಳ್ಳಾರೆ ಗ್ರಾಮದ ಹೊಯ್ಗೆಜಡ್ಡು ಪರಿಸರದ ಹೈನುಗಾರರ ಜಾನುವಾರುಗಳಿಗೆ ಲಸಿಕೆಯನ್ನು ನೀಡಿದರು.
