ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆದುಕೊಂಡು ಬರಲು ವಾಯುಪಡೆಗೆ ಸೂಚನೆ ನೀಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.
ಉಕ್ರೇನ್ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ.
