ಮಾಣಿ: ಕುಲಾಲ ಬಾಂಧವರ ಬಹುಬೇಡಿಕೆಯ ಕುಲಾಲ ಸಮುದಾಯ ಭವನ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಮಾಣಿ ಕುಲಾಲ ಸೇವಾ ಸಂಘದ ಪದಾಧಿಕಾರಿಗಳಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ರಾಜೇಶ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಶಾಸಕರು ಸಮುದಾಯ ಭವನ ನಿರ್ಮಾಣಕ್ಕೆ ಗರಿಷ್ಠ ಪ್ರಮಾಣದ ಮೊತ್ತ ಒದಗಿಸಿ ಕೊಡುವುದಾಗಿ ಭರವಸೆ ನೀಡಿದರು.. ಈ ಸಂದರ್ಭದಲ್ಲಿ ಮಾಣಿ ಕುಲಾಲ ಸೇವಾ ಸಂಘದ ಅಧ್ಯಕ್ಷರಾದ ಭೋಜನಾರಾಯಣ ನೇರಳಕಟ್ಟೆ, ಗೌರವಾಧ್ಯಕ್ಷರಾದ ರಾಮಚಂದ್ರ ಮಾಸ್ಟರ್ ಗಣೇಶ ನಗರ, ಕುಲಾಲ ಸೇವಾ ಸಂಘದ ಪದಾಧಿಕಾರಿಗಳಾದ ಗೋಪಾಲ್ ಕುಲಾಲ್ ಶಂಭುಗ ,ಯತಿರಾಜ್ ಪೆರಾಜೆ, ನಾಗೇಶ್ ಮಾಣಿ ಉಪಸ್ಥಿತರಿದ್ದರು..
