ಸುದ್ದಿ9ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ದಕ್ಷಿಣವಲಯ- ಬೋಳಾರ, ಮಂಗಳೂರು ಹಾಗೂ ಸೈಂಟ್ ಜೋಸೆಫ್ ವರ್ಕರ್ಸ್ ಹಿ.ಪ್ರಾ.ಶಾಲೆಮತ್ತು ಸೈಂಟ್ ರೇಮೆಂಡ್ಸ್ ಪ್ರೌಢಶಾಲೆ ವಾಮಂಜೂರು ಇವರ ಸಹಯೋಗದಲ್ಲಿ ನಡೆದ ಮಂಗಳೂರು ದಕ್ಷಿಣ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2014ಇದರ ಉದ್ಘಾಟಡನೆಯನ್ನುಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ಜೆ ಆರ್ ಲೋಬೋನೆರವೇರಿಸಿದರು.
ಕರ್ನಾಟಕ ಸರಕಾರದ ಆರೋಗ್ಯ ಸಚಿವರಾದ ಖಾದರ್ ಅವರು 2012-2013-14ನೇ ಸಾಲಿನ ಸರಕಾರಿ ಪ್ರೌಢ ಶಾಲೆಯ ಅತ್ಯಾಧಿಕ ಅಂಕ ಗಳಿಸಿದ ಹತ್ತನೇ ತರಗತಿಯ ವಿಧ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಿಸಿ ವಿಧ್ಯಾರ್ಥಿಗಳ ಸಾಂಸ್ಕ್ರತಿಕ ಕಾರ್ಯಕ್ರಮ ವೀಕ್ಷಿಸಿ ಶುಭ ಹಾರೈಸಿದರು. ಮಂಗಳೂರು ಉತ್ತರ ವಿಧಾನ ಸಭಾ ಶಾಸಕ ಮೊಐದಿನ್ ಬಾವಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ,ಶಾಲಾ ಸಂಚಾಲಕರಾದ ಪಾ.ಸಿಪ್ರೀಯನ್ ಮೋಂತೆರೋ, ಜಿಲ್ಲಾ ಪಂಚಾಯತ್ ಸದಸ್ಯರಾದ ಮೆಲ್ವಿನ್, ಯಶವಂತಿ ಆಳ್ವ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಪಾಧ್ಯಕ್ಷರುಹಾಗೂ ಶಾಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.












