
ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ ಮಹಾಂತೇಶ(40) ಮೃತ ವ್ಯಕ್ತಿ. ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಮಹಾಂತೇಶ ರಾತ್ರಿ ಮನೆಯಲ್ಲಿ ಜಗಳವಾಡಿಕೊಂಡು ಬೈಕ್ನಲ್ಲಿ ಹೊರ ಬಂದಿದ್ದರು.
ಜೀವನದಲ್ಲಿ ಜಿಗುಪ್ಸೆಹೊಂದಿ ಮಸ್ಕಿಯ ಲಿಂಗಸುಗೂರು ರಸ್ತೆಯಲ್ಲಿರುವ ಸರ್ಕಾರಿ ಪಬ್ಲಿಕ್ ಶಾಲೆಯ ಹಿಂಭಾಗದಲ್ಲಿ ಬೈಕ್ ನಿಲ್ಲಿಸಿ ಪಕ್ಕದ ಮರವೊಂದಕ್ಕೆ ನೇಣು ಹಾಕಿಕೊಂಡು ಪ್ರಾಣಬಿಟ್ಟಿದ್ದಾನೆ. ಘಟನೆ ಹಿನ್ನೆಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
