ಕೈಕಂಬ : ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ – ಮಸೀದಿ ಪರವಾನಿಗೆ ರದ್ದುಗೊಳಿಸಿ -ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಲು ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಯಥಾಸ್ಥಿತಿ ಕಾಪಾಡಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಗಂಜಿಮಠ ಗ್ರಾಮಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಲಿಖಿತ ಮನವಿWhatsApp Image 2022-04-23 at 11.14.23 AM

ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣ ಸಂಧರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ.

ಮೇಲ್ನೋಟಕ್ಕೆ ನೋಡಿದಾಗ ಪುರಾತನ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಡ ಕಟ್ಟಿರುವುದು ಕಂಡುಬರುತ್ತದೆ. ಕಟ್ಟಡದ ಒಳಗೆ ಮತ್ತು ಹೊರಗಡೆ ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತಿದೆ ಆದುದರಿಂದ ಗಂಜಿಮಠ ಗ್ರಾಮಪಂಚಾಯತಿ ನೀಡಿದ ಕಟ್ಟಡ ಪರವಾನಿಗೆ ನಂ 11/2021/22 ರ ಪ್ರಕಾರ ನೀಡಿರುವ ಮಸೀದಿ ನವೀಕರಣದ ಅನುಮತಿಯನ್ನು ರದ್ದುಗೊಳಿಸಿ ಇದನ್ನು ಪರಿಶೀಲಿಸಿ ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಬೇಕು ಮತ್ತು ಆ ಸ್ಥಳದಲ್ಲಿರುವ ಕಟ್ಟಡವನ್ನು ಯಥಾಸ್ಥಿತಿಯಲ್ಲಿರುವಂತೆ ಕಾಪಾಡಿಕೊಳ್ಳಲು ಕ್ರಮಕೈಗೊಳ್ಳಬೇಕೆಂದು ಮನವಿ ನೀಡಲಾಯಿತು,

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇವತ್ತು ಸಂಜೆಯ ಒಳಗೆ ನವೀಕರಣ ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಮಸಿದೀ ಅಡಳಿತ ಕಮಿಟಿ ಗೆ ನೋಟಿಸು ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಹಿಂದು ಜಾಗರಣಾ ವೇದಿಕೆಯ ಜಿಲ್ಲಾ ಪ್ರಮುಖರಾದ ಶ್ರೀ ಹರೀಶ್ ಮಟ್ಟಿ, ಶ್ರೀ ಪ್ರಶಾಂತ್ ಕೆಂಪುಗುಡ್ಡೆ, ಹಿಂಜಾವೇ ನಗರ ಯುವವಾಹಿನಿ ಸಂಯೋಜಕರಾದ ಶ್ರೀ ಚೇತನ್ ಮೂಡುಶೆಡ್ಡೆ, ಶಿವಪ್ರಸಾದ್ ಧನುಪೂಜೆ, ಸಂದೀಪ್ ಮಟ್ಟಿ, ಶಿವರಾಜ್ ಮಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *