ಮುಂಬಯಿ : “ಸಂಶೋಧನೆ ಮತ್ತು ಮತ್ತು ಇತಿಹಾಸ ಪ್ರಜ್ಞೆ ಎಲ್ಲರಿಗೂ ಅಗತ್ಯ. ಸಂಕುಚಿತ ಮನೋಧರ್ಮ ಮತ್ತು ಅತಿ ಭಾವನಾತ್ಮಕತೆಯಿಂದ ಸತ್ಯ ಗೋಚರಿಸುತ್ತಿಲ್ಲ. ಇಂತಹ ಅಡ್ಡಿಗಳನ್ನು ಬದಿಗೆ ಸರಿಸಿ ಶುದ್ದ ಕಣ್ಣಿನಿಂದ ಸಮಾಜವನ್ನು ನೋಡುವಂತಾಗಬೇಕು” ಎಂದು ಆಳ್ವಾಸ್ ಸಂಸ್ಥೆಯ ಟ್ರಸ್ಟಿ ವಿವೇಕ ಆಳ್ವ ನುಡಿದರು.IMG-20220528-WA0052

ಆಳ್ವಾಸ್ ಕಾಲೇಜ್‌ನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಮತ್ತು ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ವತಿಯಿಂದ ಬಿ.ಸಿ ರೋಡು ಸಂಚಯಗಿರಿಯ ತುಳು ಬದುಕು ವಸ್ತುಸಂಗ್ರಹಾಲಯದ ಸಭಾಂಗಣದಲ್ಲಿ ನಡೆಸಲ್ಪಟ್ಟ “ತುಳುವ ಇತಿಹಾಸ ಶೋಧ-ವೀಕ್ಷಣೆ ಮತ್ತು ಅವಲೋಕನ” ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವೇಕ ಆಳ್ವ ಮಾತನಾಡಿದರು.IMG-20220528-WA0053

ಫ್ರಾನ್ಸ್ನ ಸಂಶೋಧಕ ವಿನ್ಸೆಂಟ್ ಮುಖ್ಯ ಅತಿಥಿಯಾಗಿ ಮಾತನಾಡಿ ಫ್ರಾನ್ಸ್ ನಲ್ಲಿ ಇತಿಹಾಸ ಮೂಸಿಯಂ ಬಹಳ ಮಹತ್ವ ಇದೆ. ಬಂಟ್ವಾಳದ ವಸ್ತು ಸಂಗ್ರಹಾಲಯ. ತುಳುನಾಡಿನ ಜನ ಜೀವನದ ಪ್ರತಿಬಿಂಬ. ಜಾಗತಿಕ ಮಹತ್ವವುಳ್ಳದ್ದು ಎಂದರು.IMG-20220528-WA0054

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕರಾಮ ಪೂಜಾರಿ ಮಾತನಾಡಿ “ತುಳು ನಾಡು ಸಮೃದ್ದ ಪ್ರಕೃತಿಯ ನಾಡು. ಬಹು ಸಂಖ್ಯೆಯಲ್ಲಿ ಇಲ್ಲಿ ಹುಲಿಗಳಿತ್ತು. ಸಂಸ್ಕೃತಿಯ ನಾಶದ ಪ್ರಾಯಶ್ಚಿತವಾಗಿ ಸಂಸ್ಕೃತಿಯ ವೈಭವೀಕರಣ ನಡೆಯುತ್ತಿದ್ದೆ’ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶುಭ ಹಾರೈಸಿದರು. ರಾಣಿ ಅಬ್ಬಕ ಮತ್ತು ತುಳುನಾಡಿನ ಆಡಳಿತ ವ್ಯವಸ್ಥೆ, ಭೌತಿಕ ಸಂಸ್ಕೃತಿಗಳು ಕಟ್ಟಿಕೊಡುವ ತುಳುನಾಡಿನ ಇತಿಹಾಸ. ಮೊದಲಾದ ವಿಷಯಗಳಲ್ಲಿ ವಿಚಾರ ಗೋಷ್ಟಿ ನಡೆಯಿತು. ವಿದ್ಯಾರ್ಥಿಗಳಾದ ಹೇಮಂತ್ ಕುಮಾರ್, ಸ್ಪರ್ಶ ಪಂಜಿಕಲ್ ಅನಿಸಿಕೆ ವ್ಯಕ್ತಪಡಿಸಿದರು. ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ ಕೈರೋಡಿ ಪ್ರಸ್ತಾವನೆಗೈದರು.

By Suddi9

Leave a Reply

Your email address will not be published. Required fields are marked *