Published On: Wed, Jun 8th, 2022

ದುಬಾಯಿ ಯಕ್ಷೋತ್ಸವ 2022 ಲಲಿತೋಪಖ್ಯಾನ – ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ

ದುಬಾಯಿ: ಪೂರ್ವಪ್ರಕಟಿತ, ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ(DYAT) ಪ್ರಾಯೋಜಿತ, ಜೂ.11ರಂದು ಶನಿವಾರ ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ.WhatsApp Image 2022-06-08 at 2.35.32 PM

ಅಭ್ಯಾಗತರಾಗಿ ರಂಗದ ರಂಗೇರಿಸಲಿರುವ ಪ್ರಸಿದ್ಧ ಯುವ ಮಹಿಳಾ ಭಾಗವತರಾದ ಶ್ರೀಮತಿ ಅಮೃತ ಅಡಿಗ, ಮದ್ದಳೆಗಾರರಾದ ಶ್ರೀಯುತ ಕೌಶಿಕ್ ರಾವ್ ಪುತ್ತಿಗೆ, ಶ್ರೀಯುತ ಸವಿನಯ ನೆಲ್ಲಿತೀರ್ಥ, ಪ್ರಮುಖ ಸ್ತ್ರೀಪಾತ್ರದಲ್ಲಿ ರಂಜಿಸಲಿರುವ ಶ್ರೀಯುತ ದೀಪಕ್ ರಾವ್ ಪೇಜಾವರ, ವಸ್ತ್ರಾಲಂಕಾರದ ಶ್ರೀಯುತ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ವರ್ಣಾಲಂಕಾರದ ಶ್ರೀಯುತ ನಿತಿನ್ ಕುಂಪಲ ಮೊದಲಾದವರು ಈಗಾಗಲೇ ಯಕ್ಷಗಾನ ಅಭ್ಯಾಸ ತರಗತಿ ದುಬಾಯಿ ತಂಡವನ್ನು ಸೇರಿಕೊಂಡು ಪೂರ್ವ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಯಕ್ಷರಂಗದ ಮಿನುಗುತಾರೆ, ಸ್ವರಸಾಮ್ರಾಟರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಈ ವಾರ ನಮ್ಮನ್ನು ಸೇರಿಕೊಂಡು ಅಂತಿಮ ಹಂತದ ರೂಪುರೇಷೆ ನೀಡಲಿದ್ದಾರೆ.WhatsApp Image 2022-06-08 at 2.35.33 PM

ಅಭ್ಯಾಗತರನ್ನು ಸೇರಿ ದುಬಾಯಿಯಲ್ಲಿ ದಾಖಲೆಯ 49 ಮಂದಿ ಕಲಾವಿದರು ಸಂಚಾಲಕರಾದ ಕೊಟ್ಟಿಂಜ ದಿನೇಶ ಶೆಟ್ಟರ ನೇತೃತ್ವದಲ್ಲಿ ಸಂಯೋಜನೆಗೊಂಡು ಪ್ರದರ್ಶನಕ್ಕೆ ಸಿದ್ಧರಾಗಿದ್ದಾರೆ. ತಂಡದ ಗುರುಗಳಾದ ಯಕ್ಷಮಯೂರ ಶ್ರೀಯುತ ಶೇಖರ್ ಡಿ. ಶೆಟ್ಟಿಗಾರರ ನಿರ್ದೇಶನದಲ್ಲಿ, ನಾಟ್ಯಗುರು ಶ್ರೀಯುತ ಶರತ್ ಕುಡ್ಲರ ಮಾರ್ಗದರ್ಶನದಲ್ಲಿ ಸಿದ್ಧಗೊಂಡ ಸರ್ವ ಕಲಾವಿದರು ಸರಿಸುಮಾರು 72 ಪಾತ್ರಗಳನ್ನು ಕಲಾಭಿಮಾನಿಗಳ ಮುಂದೆ ಪ್ರದರ್ಶಿಸಲಿದ್ದಾರೆ.WhatsApp Image 2022-06-08 at 2.35.33 PM (1)

ಬಹುಸಂಖ್ಯೆಯ ಸ್ವಯಂಸೇವಕರ ತಂಡ ರಂಗಸ್ಥಳ, ವೇಷಭೂಷಣ, ಆಸನ ವ್ಯವಸ್ಥೆ, ಅಲಂಕಾರ ಮುಂತಾದ ಸಿದ್ಧತೆ – ಸಡಗರಗಳಲ್ಲಿ ತೊಡಗಿಸಿಕೊಂಡಿದ್ದಾರೆ.WhatsApp Image 2022-06-08 at 2.35.33 PM (2)

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಚೊಚ್ಚಲ ಯಕ್ಷರಕ್ಷಾ ವಿಶೇಷ ವಾರ್ಷಿಕ ಪ್ರಶಸ್ತಿ ಯನ್ನು ಯಕ್ಷಗಾನ ಕಲಾವಿದ – ಸಂಘಟಕ ಶ್ರೀಯುತ ಪ್ರಭಾಕರ ಡಿ. ಸುವರ್ಣ ರಿಗೆ – ಗಣ್ಯರ ಸಮಕ್ಷ ಪ್ರದಾನ ಮಾಡಲಾಗುವುದು.Dubai Yakshagana Devi Lalithopakhyana

ಜೂನ್ 11ರ, ಇಳಿಸಂಜೆ 4.00 ಗಂಟೆಗೆ ಸರಿಯಾಗಿ ಚೌಕಿಪೂಜೆ, 4.30ಕ್ಕೆ ಪೂರ್ವರಂಗ ಚೆಂಡೆ ಜುಗಲ್ಬಂದಿ, 5.00 ಕ್ಕೆ ಸರಿಯಾಗಿ ಕಥಾರಂಭವಾಗಲಿದೆ. ಮಾತ್ರವಲ್ಲದೆ ರಾತ್ರಿ 9.00 ಗಂಟೆಗೆ ಸರಿಯಾಗಿ ಮಹಾದಾನಿಗಳ ನೆರವಿನಿಂದ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಲಿದೆ.

ಯು.ಎ.ಇಯ ಸಮಸ್ತ ಕಲಾಭಿಮಾನಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಕಲೆ- ಕಲಾವಿದರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರೋತ್ಸಾಹಿಸಿ ಭಗವದನುಗ್ರಹಕ್ಕೆ ಪಾತ್ರರಾಗಬೇಕೆಂದು, ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯ ಮುದ್ರಣ- ಮಾಧ್ಯಮ- ಪ್ರಸಾರಗಳ ನೇತೃತ್ವ ವಹಿಸಿರುವ ಶ್ರೀಯುತ ಗಿರೀಶ್ ನಾರಾಯಣ್ ಕಾಟಿಪಳ್ಳ ಅವರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter