Published On: Mon, Jun 27th, 2022

ಬಂಟ್ವಾಳ ತಾಲೂಕು ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಬಂಟ್ವಾಳ : ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಜೂ.27ರಂದು ಸೋಮವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆಯನ್ನು ಆಚರಿಸಲಾಯಿತು.WhatsApp Image 2022-06-27 at 2.07.38 PM

ಉಪತಹಸೀಲ್ದಾರ್ ನವೀನ್ ಬೆಂಜನಪದವು ಅವರು ಸಭೆಯ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಸುಮಾರು ಐನೂರು ವರ್ಷಗಳ ಹಿಂದೆಯೇ ತಮ್ಮ ದೂರದೃಷ್ಟಿಯಿಂದ ಸುಸಜ್ಜಿತ ನಗರವೊಂದನ್ನು ನಿರ್ಮಿಸಿ ಬೆಂಗಳೂರಿನ ನಿರ್ಮಾತೃ ಎಂಬ ಬಿರುದು ಗಳಿಸಿದವರು ಕೆಂಪೇಗೌಡರು ಎಂದು ಹೇಳಿದರು.WhatsApp Image 2022-06-27 at 2.07.38 PM (1)

ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ ಕೆಂಪೇಗೌಡರು ನಿರ್ಮಿಸಿದ ದೇವಸ್ಥಾನಗಳು, ರಸ್ತೆಗಳು, ಕೆರೆಗಳು, ಕೋಟೆ ಕೊತ್ತಲಗಳು ಇಂದಿಗೂ ಬೆಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಸಹಾಯಕ ಭಾನುಪ್ರಕಾಶ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter