Published On: Wed, Jul 6th, 2022

ಪೋಷಕರಿಂದ ಮನವಿ- ಭದ್ರತಾಪಡೆಗೆ ಶರಣಾದ ಇಬ್ಬರು ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಶರಣಾಗಿದ್ದಾರೆ.

ಇಂದು ಮುಂಜಾನೆ ಹಡಿಗಾಂ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಇಬ್ಬರು ಉಗ್ರರು ಪೋಷಕರ ಮನವಿಯ ಮೇರೆಗೆ ಸೈನಿಕರಿಗೆ ಶರಣಾಗಿದ್ದಾರೆ.

ಭದ್ರತಾ ಪಡೆಗಳು ಉಗ್ರರ ಅಡಗುತಾಣದ ಮೇಲೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಬ್ಬರು ಉಗ್ರರ ಪೋಷಕರನ್ನು ಭದ್ರತಾ ಪಡೆಗಳು ಕರೆತಂದಿದ್ದರು. ಈ ವೇಳೆ ಪೋಷಕರು ತಮ್ಮ ಮಕ್ಕಳೊಂದಿಗೆ ಮಾತನಾಡಿ ಶರಣಾಗುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಆ ಇಬ್ಬರು ಉಗ್ರರು ಪೊಲೀಸರಿಗೆ ಶರಣಾಗಿದ್ದಾರೆ. ಈ ಇಬ್ಬರು ಸ್ಥಳೀಯರಾಗಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಭಯೋತ್ಪಾದಕ ಗುಂಪಿಗೆ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಅವರಲ್ಲಿದ್ದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter