*ಮೆಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ*
ಬಂಟ್ವಾಳ: ಮೆಲ್ಕಾರ್ ನ ಮಾರ್ನಬೈಲಿನಲ್ಲಿರುವ ಮೆಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಕುಡೂರು ಕೃಷ್ಣ ಭಟ್ ದತ್ತಿ ಉಪನ್ಯಾಸವಾದ ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯದ ಪಾತ್ರ ವಿಚಾರದ ಕುರಿತು ಇರಾ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಸೋನಿತಾ ಕೆ. ಮಾತನಾಡಿದರು. ಈ ಸಂದರ್ಭ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ್, ಗೌ.ಪ್ರಧಾನ ಕಾರ್ಯದರ್ಶಿ ವಿ.ಸುಬ್ರಹ್ಮಣ್ಯ ಭಟ್, ಮೆಲ್ಕಾರ್ ಮಹಿಳಾ ಮದವಿಪೂರ್ವ ಮತ್ತು ಪದವಿ ಕಾಲೇಜಿನ ಪ್ರಿನ್ಸಿಪಾಲ್ ಅಬ್ದುಲ್ ಲತೀಫ್, ಉಪಪ್ರಾಂಶುಪಾಲೆ ಏಂಜಲಿನಾ ಸುನೀತಾ ಪಿರೇರಾ, ಉಪನ್ಯಾಸಕ ಎಂ.ಡಿ.ಮಂಚಿ ಉಪಸ್ಥಿತರಿದ್ದರು.