ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಯಕ್ಷಿತ್ ಗೆ ಸನ್ಮಾನ
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಯಕ್ಷಿತ್ ಇವರು ಐಸಿಎಐ ಸಂಸ್ಥೆ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಹಿನ್ನೆಲೆಯಲ್ಲಿ ಅವರು ಆ.10ರಂದು ಬುಧವಾರ ಸನ್ಮಾನಿಸಲಾಯಿತು.

ಶ್ರೀರಾಮ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್, ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ಕೆ.ಎನ್.ರಮೇಶ್, ಪ್ರಾಂಶುಪಾಲ ಕೃಷ್ಣಪ್ರಸಾದ್ ಇದ್ದರು.